Header Ads Widget

ಭಟ್ಕಳ : ಅನ್ಯ ಕೋಮಿನ ತಂಡದಿಂದ ಹಿಂದೂ ಯುವಕರ ಮೇಲೆ ಕೋಳಿ ಮೊಟ್ಟೆಯಿಂದ ಹಲ್ಲೆ..!!

ಭಟ್ಕಳ: ತಾಲೂಕಿನ ವಿವಿಧ ಭಾಗದಲ್ಲಿ ಅನ್ಯಕೋಮಿನ ಯುವಕರ  ಗುಂಪು  ಬೈಕ್ ಮೇಲೆ ಬಂದು ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ  ಮೊಟ್ಟೆಯಿಂದ ಹಲ್ಲೆ ಮಾಡಿ  ವಿಕೃತಿ ಮೆರೆದಿರುವ ಘಟನೆ ಮಣ್ಕುಳಿಯ ರಾಘವೇಂದ್ರಸ್ವಾಮಿ ಮಠದ ಬಳಿ ನಡೆದಿದೆ.

ಈ ವೇಳೆ ಓರ್ವ ಆರೋಪಿ ಸಾರ್ವಜನಿಕರ ಕೈಯಲ್ಲಿ ಸಿಕ್ಕಿ ಬಿದ್ದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ  .ತಾಲೂಕಿನ ಹೆಬಳೆ ಗಾಂಧಿನಗರ, ಹನುಮಾನ ನಗರ ಹಾಗೂ ಪುರವರ್ಗದಲ್ಲಿ ಮೊಟ್ಟೆ ದಾಳಿಮಾಡಿ ಯುವಕರು ವಿಕೃತಿ ಮೆರೆದಿದ್ದಾರೆ.

ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯತ ವ್ಯಾಪ್ತಿಯ ಗಾಂಧಿನಗರದಲ್ಲಿ ಮೊದಲು ಮೂರು ಬೈಕ್ ಮೇಲೆ ಬಂದ ಆರು ಜನ ಅನ್ಯ ಕೋಮಿನ  ಯುವಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಓರ್ವನ ಮೇಲೆ ಮೊಟ್ಟೆ ದಾಳಿ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.

ನಂತರ ಅದೇ ಯುವಕರು ಹನುಮಾನ ನಗರದಲ್ಲಿ  ಊಟ ಮಾಡಿಕೊಂಡು ರಾತ್ರಿ ವಾಕಿಂಗ್ ಮಾಡುತ್ತಿದ್ದ ಓರ್ವರ ಮೇಲೆ ಯಾವುದೋ ವಸ್ತುವಿನಿಂದ ಎದೆ ಭಾಗಕ್ಕೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ .ನಂತರ ಅಲ್ಲಿಂದ ಕಾಲ್ಕಿತ್ತ ಯುವಕರು ತಾಲ್ಲೂಕಿನ ಪುರವರ್ಗದಲ್ಲಿ ಮತ್ತೆ ಪ್ರತ್ಯಕ್ಷವಾಗಿ ಮನೆ ಪಕ್ಕದಲ್ಲಿದ್ದ ಬೇಕರಿಗೆ ಹೋಗಿ ಬರುತ್ತಿದ್ದ ಯುವಕನ ಮೇಲೆ ಮತ್ತೆ ಮೊಟ್ಟೆಯಿಂದ ಹಲ್ಲೆ ನಡೆಸಿದ್ದಾರೆ .

ನಂತರ ಇದನ್ನು ಗಮನಿಸಿದ ಹಲ್ಲೆಗೊಳಗಾದ ಯುವಕನ ಸಹೋದರ ತಕ್ಷಣಕ್ಕೆ ತನ್ನ ಕಾರನ್ನು ತೆಗೆದುಕೊಂಡು ಮೂರು ಬೈಕನ್ನ ಹಿಂಬಾಲಿಸಿದ್ದಾನೆ ನಂತರ ಮಣ್ಕುಳಿಯ ರಾಘವೇಂದ್ರಸ್ವಾಮಿ ಮಠದ ಸಮೀಪ  ಇಬ್ಬರು ಯುವಕರನ್ನು ಹಿಂಬಾಲಿಸಿ ಹಿಡಿಯಲು ಯಶಸ್ವಿಯಾಗಿದ್ದಾನೆ. ಆದರೆ ಸಾರ್ವಜನಿಕರು ಜಮಾಯಿಸುವಷ್ಟರಲ್ಲಿ ಓರ್ವ ಯುವಕ ತಪ್ಪಿಸಿಕೊಂಡು ಪರಾರಿಯಾಗಿದ್ದು . ಸಿಕ್ಕಿಬಿದ್ದ ಇನ್ನೋರ್ವ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದಾರೆ

ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿ ಪೊಲೀಸರು ಸಾರ್ವಜನಿಕರನ್ನು ಸಮಾಧಾನಪಡಿಸಿ ಸಿಕ್ಕಿಬಿದ್ದ  ಓರ್ವ ಆರೋಪಿಯನ್ನು ಪೊಲೀಸರು ವಶಪಡಿಸಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.ನಂತರ ಉಳಿದೆಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಸಾರ್ವಜನಿಕ  ಪೋಲಿಸ ಠಾಣೆಯ ಬಳಿ  ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದರು .

ಬಳಿಕ ಸ್ಥಳಕ್ಕೆ ಕೆಎಸ್ ಆರ್‌ಪಿ ತುಕಡಿಯನ್ನು ಕರೆದು ಆಕ್ರೋಶಗೊಂಡ ಸಾರ್ವಜನಿಕರನ್ನು  ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ತಾಲೂಕಿನಾದ್ಯಂತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಡಿವೈಎಸ್‌ಪಿ ಬೆಳ್ಳಿಯಪ್ಪ ತಿಳಿಸಿದ್ದಾರೆ.

ಭಟ್ಕಳ ಶಾಸಕ ಸುನಿಲ್ ನಾಯ್ಕ ಅಧಿಕಾರಿಗಳ ಸಭೆ ನಡೆಸಿ  ಆರೋಪಿಗಳ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಶಾಂತಿ ಶುವ್ಯವಸ್ಥೆ ಕಾಪಾಡುವಂತೆ  ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

Post a Comment

0 Comments