Header Ads Widget

ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವಾಗ ಯುವಕನೊಬ್ಬ ಕುಸಿದು ಬಿದ್ದು ಸಾವು..!!

ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಬೇಳಂಜೆ ಗ್ರಾಮದ ಕೆಪ್ಪೆಕೆರೆಯ ಈಶ್ವರ ನಗರದಲ್ಲಿರುವ ತನ್ನ ಮನೆ ಬಳಿಯ ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವಾಗ ಯುವಕನೊರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಸಾವನ್ನಪ್ಪಿದ ಯುವಕ ಕೃಷ್ಣ ನಾಯ್ಕ (26) ಎಂದು ತಿಳಿಯಲಾಗಿದೆ.

ಅವರು ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದಾಗ ಅಲ್ಲಿಯೇ ಕುಸಿದು ಬಿದ್ದವರನ್ನು ಮನೆಗೆ ಕರೆದುಕೊಂಡು ಬಂದು ಆರೈಕೆ ಮಾಡಲಾಗಿತ್ತು.

ಅವರಿಗೆ ರಾತ್ರಿ ಸಮಯ ವಿಪರೀತ ಎದೆನೋವು ಜಾಸ್ತಿಯಾದ ಕಾರಣ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಹೆಬ್ರಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸಿದ್ದಾರೆ.

Post a Comment

0 Comments