Header Ads Widget

ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು : ಶಾಸಕ ಕಾಮತ್ ಸೂಚನೆ..!!



ಮಂಗಳೂರು: ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋಕಳ್ಳತನವಾಗಿದ್ದು, ಗೋಕಳ್ಳರ ಬಂಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಅಕ್ರಮವಾಗಿ ಗೋಕಳ್ಳತನ, ಗೋಹತ್ಯೆ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಲು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಬಜಾಲ್ ಪರಿಸರದಲ್ಲಿ ಗೋ ಕಳ್ಳತನವಾಗಿದ್ದು, ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು, ಶಾಸಕ ಕಾಮತ್ ಅವರ ಸೂಚನೆಯಿಂದ ತನಿಖೆ ಇನ್ನಷ್ಟು ಚುರುಕು ದೊರೆತಿದೆ. 

ಈ ಕುರಿತು ಮಾಹಿತಿ ನೀಡಿದ ಶಾಸಕ ವೇದವ್ಯಾಸ್ ಕಾಮತ್, ಹಿಂದೂ ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋ ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿ ಮುಟ್ಟುಗೋಲು ಹಾಕಲು ಸೂಚನೆ ನೀಡಿರುವುದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಇನ್ನಷ್ಟು ಕಠಿಣ ಶಿಕ್ಷೆಯನ್ನು ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಎಚ್ಚರಿಕೆ ನೀಡಿದ್ದಾರೆ.


Post a Comment

0 Comments