Header Ads Widget

ಐಟಿಬಿಪಿ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ನದಿ ಉರುಳಿ ಬಿದ್ದು 6 ಮಂದಿ ಸಿಬ್ಬಂದಿಗಳು ಸಾವು : 10 ಮಂದಿ ಗಂಭೀರ...!!

ಶ್ರೀನಗರ : ಪಹಲ್ ಗಾಮ್ ಸಮೀಪ 37 ಮಂದಿ ಐಟಿಬಿಪಿ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ತಾಂತ್ರಿಕ ಸಮಸ್ಯೆಯಿಂದ ನದಿ ಉರುಳಿ ಬಿದ್ದು ಸುಮಾರು ಆರು ಮಂದಿ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಉಳಿದವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆಯಲ್ಲಿ ಆರು ಐಟಿಬಿಪಿ ಸಿಬ್ಬಂದಿ ಸ್ಥಳದಲ್ಲೇ ಮತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.10 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಐಟಿಬಿಪಿ ಸಿಬ್ಬಂದಿ ಮತ್ತು ಇಬ್ಬರು ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ‌ಮಾಹಿತಿ ತಿಳಿಯಲಾಗಿದೆ.

ಎಲ್ಲರೂ ಅಮರನಾಥದಲ್ಲಿ ಕರ್ತವ್ಯ ಮುಗಿಸಿಕೊಂಡು ಪಾಲ್ಗಾಮ್‌ಗೆ ಮರಳುತ್ತಿದ್ಗ ವೇಳೆ ಬಸ್ಸಿನ ಬ್ರೇಕ್ ವೈಫಲ್ಯಗೊಂಡು ಈ ಘಟನೆ ನಡೆದಿದೆ.

ಗಂಭೀರ ಗಾಯಗೊಂಡವರನ್ನು ಏರ್ ಲಿಫ್ಟ್ ಮೂಲಕ ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.

ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ಸಂಪೂರ್ಣ ನುಜ್ಜು ಗುಜ್ಜಾಗಿದೆ.ಗಂಭೀರ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Post a Comment

0 Comments