Header Ads Widget

"ಕೇಂದ್ರ ಸರ್ಕಾರ ಜನರನ್ನು ವಂಚಿಸುತ್ತಿದೆ" : ನಿರುದ್ಯೋಗ ಸಮಸ್ಯೆಯಿಂದ ಆತ್ಮಹತ್ಯೆಯ ಕುರಿತು ಪ್ರಿಯಾಂಕಾ ಗಾಂಧಿ ವಾಗ್ದಾಳಿ..!!

ನವದೆಹಲಿ:‌ ದೇಶದಲ್ಲಿ ನಿರುದ್ಯೋಗದ ಪ್ರಚೋದನೆಯಿಂದ ಆತ್ಮಹತ್ಯೆಗೈದವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂಬ ವರದಿಗಳ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 2021ರಲ್ಲಿ ದೇಶದಲ್ಲಿ 11,724 ಜನರು ನಿರುದ್ಯೋಗದಿಂದ ಆತ್ಮಹತ್ಯೆ ನಡೆಸಿದ್ದಾರೆ. ಈ ಸಂಖ್ಯೆಯು 2020 ಸಾಲಿಗಿಂತ ಶೇಕಡಾ 26 ರಷ್ಟು ಹೆಚ್ಚಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದಾಖಲೆಯನ್ನು ಮೀರುತ್ತಿರುವ ನಿರುದ್ಯೋಗ ಸಮಸ್ಯೆ ಯುವಸಮೂಹವನ್ನು ಹತಾಶೆಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನರನ್ನು ವಂಚನೆಗೊಳಪಡಿಸುತ್ತಿದೆ ಮತ್ತು ಯುವಕರ ಹತಾಶೆಗೆ ಪರಿಹಾರವನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.
ಭಯಾನಕ ನಿರುದ್ಯೋಗಕ್ಕೆ ಕೇಂದ್ರ ಸರ್ಕಾರದ ಬಳಿ ಪರಿಹಾರ ಅಥವಾ ಉತ್ತರವಿಲ್ಲ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್’ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿಯ ಸರ್ಕಾರ ಸುಳ್ಳು ಭರವಸೆಗಳನ್ನು ಹರಡುತ್ತಿದ್ದು, ಎನ್.ಡಿ.ಎ ಸರ್ಕಾರ ಕಳೆದ ಎಂಟು ವರ್ಷಗಳಲ್ಲಿ ಪ್ರತಿ 1000 ಉದ್ಯೋಗಾಕಾಂಕ್ಷಿಗಳಲ್ಲಿ ಕೇವಲ ಮೂವರಿಗೆ ಮಾತ್ರ ಉದ್ಯೋಗ ದೊರೆತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜುಲೈ ತಿಂಗಳಲ್ಲಿ ಶೇಕಡಾ 6.80 ರಷ್ಟಿದ್ದ ಭಾರತದಲ್ಲಿ ನಿರುದ್ಯೋಗ ಪ್ರಮಾಣ, ಆಗಸ್ಟ್ ವೇಳೆಗೆ ಶೇಕಡಾ ಶೇಕಡಾ 8.28ಕ್ಕೆ ಅಷ್ಟೇ ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ನಡೆಸಿದ ಅಂಕಿಅಂಶಗಳಿಂದ ಬಹಿರಂಗವಾಗಿದೆ.

Post a Comment

0 Comments