Header Ads Widget

ಪಿಕಪ್ ವಾಹನ ಬೈಕ್ ಗೆ ಢಿಕ್ಕಿ : ಯುವ ಗಾಯಕ ಸ್ಥಳದಲ್ಲೇ ಮೃತ್ಯು...!!

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಪಿಕಪ್ ವಾಹನವೊಂದು ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಯುವ ಗಾಯಕ ಹಾಗೂ ಬಿಜೆಪಿ ಕಾರ್ಯಕರ್ತ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೇಪುವಿನಲ್ಲಿ ಸಂಭವಿಸಿದೆ.

ಸಾವನ್ನಪ್ಪಿದ ಯುವಕ ಬದಿಯಡ್ಕ ನಿವಾಸಿ ಸಂದೇಶ್ (33) ಎಂದು ತಿಳಿದು ಬಂದಿದೆ.

ಸಂದೇಶ್ ವೃತ್ತಿಯಲ್ಲಿ ವಾಹನ ಚಾಲಕನಾಗಿದ್ದು, ಹವ್ಯಾಸಿ ಗಾಯಕನಾಗಿಯೂ ಮಿಂಚುತ್ತಿದ್ದ ಯುವಕ. ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಈತ ಇಂದು ಮಧ್ಯಾಹ್ನ ಅಂದಾಜು ಮೂರು ಗಂಟೆಯ ವೇಳೆಗೆ ವಿಟ್ಲ ಕಡೆಯಿಂದ ಬೈಕ್ ನಲ್ಲಿ ಬದಿಯಡ್ಕ ಕಡೆಗೆ ಪ್ರಯಾಣಿಸುವ ವೇಳೆ ಎದುರಿನಿಂದ ಅತೀ ವೇಗದಿಂದ ಮತ್ತು ಅಜಾಕರುಕತೆಯಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಈ ಘಟನೆ ಸ್ಥಳಕ್ಕೆ ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ಎಚ್.ನಾಗರಾಜ್, ಎಸ್.ಐ. ಸಂದೀಪ್, ಎಚ್.ಸಿ.ಜಯರಾಮ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದಾರೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments