Header Ads Widget

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಬೈಂದೂರು ವತಿಯಿಂದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕದ ಕಾರ್ಯಕ್ರಮದ ಅಂಗವಾಗಿ ಬೃಹತ್ ಖಾದಿ ಮೇಳ...!!

ಬೈಂದೂರು : ಇಂದು ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಕಚೇರಿಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆ  ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕದ ಕಾರ್ಯಕ್ರಮದ ಅಂಗವಾಗಿ ಬೃಹತ್ ಖಾದಿ ಮೇಳ ನಡೆಯಿತು.

ಕಾರ್ಯಕ್ರಮವನ್ನು ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಆನಂದ ಖಾರ್ವಿ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಜಡ್ಡು ಹಾಗೂ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಒಪ್ಪಂದ, ಜಿಲ್ಲಾ ಕಾರ್ಯಕಾರಿಣಿ  ಸದಸ್ಯರಾದ ಸದಾಶಿವ ಪಡುವರಿ, ಖಾದಿ ಮೇಳ ಮಂಡಲ ಸಂಚಾಲಕರಾದ ಸುರೇಶ್ ಬಟವಾಡಿ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಅನಿತಾ ಆರ್ ಕೆ, ಮಹಿಳಾ ಮೋರ್ಚ ಅಧ್ಯಕ್ಷರಾದ ಭಾಗೀರಥಿ ಸುರೇಶ್, ಪ್ರಧಾನ ಕಾರ್ಯದರ್ಶಿ ದೀಪ ಶೆಟ್ಟಿ

ಕಾರ್ಯಕ್ರಮವನ್ನು ಮಂಡಲ ಪ್ರಧಾನ ಕಾರ್ಯದರ್ಶಿ, ಪ್ರಿಯದರ್ಶಿನಿ ದೇವಾಡಿಗ ನಿರೂಪಿಸಿದರು.

Post a Comment

0 Comments