Header Ads Widget

ಉದ್ಯಾವರ : ಗಾಂಧಿ ಜಯಂತಿ ಆಚರಣೆ...!!

ಉದ್ಯಾವರ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಮತ್ತು ಕಥೋಲಿಕ್ ಸಭಾ ಉದ್ಯಾವರ ಘಟಕ ಇವರ ಜಂಟಿ ಆಶ್ರಯದಲ್ಲಿ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ಉಡುಪಿ ಧರ್ಮಪ್ರಾಂತ್ಯದ ನೂತನ ಕುಲಪತಿ ಅ. ವಂ. ಡಾ. ರೋಶನ್ ಡಿಸೋಜರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಸ್ಟ್ಯಾನಿ ಬಿ ಲೋಬೊ ಮಾತಾನಾಡಿ, ಮಹಾತ್ಮ ಗಾಂಧೀಜಿಯವರ ನಾಯಕತ್ವ ಇಡೀ ದೇಶಕ್ಕೆ ಪ್ರೇರಣೆ. ಅವರ ಹೋರಾಟದ ಫಲದಿಂದ ನಾವೆಲ್ಲರೂ ಇಂದು ಸ್ವತಂತ್ರರಾಗಿದ್ದೇವೆ. ಅವರಂತೆ ಆಗಲು ಅಸಾಧ್ಯವಾದರೂ, ಅವರಂತೆ ನಮ್ಮ ಜೀವನದಲ್ಲೂ ಬದಲಾವಣೆ ತರೋಣ ಎಂದರು.

ಈ ಸಂದರ್ಭದಲ್ಲಿ ಸಹಾಯಕ ಧರ್ಮಗುರು ವಂ. ಫಾ. ಲಿಯೋ ಡಿಸೋಜ, ಲಯನ್ಸ್ ಜಿಲ್ಲೆ 317Cಯ ವಲಯ 2ರ ಅಧ್ಯಕ್ಷ ಲ. ಜೋನ್ ಫೆರ್ನಾಂಡಿಸ್, ಕಥೋಲಿಕ್ ಸಭಾ ಕೇಂದ್ರೀಯ ಅಧ್ಯಕ್ಷೆ ಮೇರಿ ಡಿಸೋಜ, ಉಪಾಧ್ಯಕ್ಷ ರೊನಾಲ್ಡ್ ಅಲ್ಮೇಡಾ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಲಯನ್ ಅನಿಲ್ ಲೋಬೊ, ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ, ಕಾರ್ಯದರ್ಶಿ ಮೈಕಲ್ ಡಿಸೋಜ, 20 ಅಯೋಗಗಳ ಸಂಯೋಜಕ ಜೆರಾಲ್ಡ್ ಪಿರೇರಾ, ಕಥೋಲಿಕ್ ಸಭಾ ಉದ್ಯಾವರ ಘಟಕದ ಕಾರ್ಯದರ್ಶಿ ಟೆರೆನ್ಸ್ ಪಿರೇರಾ ಮತ್ತಿತರರು ಉಪಸ್ಥಿತರಿದ್ದರು.

ಕಥೋಲಿಕ್ ಸಭಾ ನಿಕಟಪೂರ್ವ ಅಧ್ಯಕ್ಷ ಲಾರೆನ್ಸ್ ಡೆಸಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಿರ್ದೇಶಕ ಲ. ವಿಲ್ಫ್ರೆಡ್ ಡಿಸೋಜ ಧನ್ಯವಾದ ಸಮರ್ಪಿಸಿದರು.

Post a Comment

0 Comments