ಬೆಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಪೋಲ್ ಗೆ ಡಿಕ್ಕಿ ಹೊಡೆದ ಘಟನೆ ಜ್ಞಾನಭಾರತಿ ಯೂನಿವರ್ಸಿಟಿ ಬಳಿ ನಡೆಸಿದೆ.
ಢಿಕ್ಕಿ ಪರಿಣಾಮ ಸುತ್ತ ಮುತ್ತಲಿನ ಮನೆಗಳಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ.ಅಪಘಾತಕ್ಕಿಡಾಗಿರೋ ಕಾರು ಲ್ಯಾಂಬೋರ್ಗಿನಿ ಸತೀಶ್ ಪ್ರಪುಲ್ಲಾ ಚಂದ್ರ ಎಂಬ ಉದ್ಯಮಿಗೆ ಸೇರಿದೆ.
ಘಟನೆ ಕುರಿತು ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಳಿಕ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
0 Comments