Header Ads Widget

ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಈ ಋತುವಿನ ಕಂಬಳದ ಸಂಭಾವ್ಯ ವೇಳಾಪಟ್ಟಿ ಪ್ರಕಟ..!!



ಮಂಗಳೂರು
: ಮೂಡುಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಸಭೆಯು ಆದಿತ್ಯವಾರ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದಿದ್ದು, ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಈ ಋತುವಿನ ಕಂಬಳದ ಸಂಭಾವ್ಯ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು. ಕಂಬಳ ಋತು ನ.5ರಂದು ಶಿರ್ವ ಕಂಬಳದೊಂದಿಗೆ ಆರಂಭಗೊಳ್ಳಲಿದ್ದು, ಎಪ್ರಿಲ್ 8ರ ವರೆಗೆ ಒಟ್ಟು 24 ಕಂಬಳಗಳು ನಡೆಯಲಿವೆ. 

ಈ ಬಾರಿ ಕಂಬಳ ಪಣಪಿಲದಲ್ಲಿ ಹೊಸದಾಗಿ ಆಯೋಜನೆಗೊಳ್ಳುತ್ತಿದೆ. ಮಂಗಳೂರು ಪಿಲಿಕುಳದ ಕಂಬಳಕ್ಕೂ ನ.12ರಂದು ದಿನಾಂಕ ನೀಡಲಾಗಿದ್ದು, ಈ ಬಗ್ಗೆ ಜಿಲ್ಲಾಡಳಿತ ನಿರ್ಧಾರ ಕೈಗೊಳ್ಳಬೇಕಾಗಿದೆ. ಕೆಲವು ವರ್ಷಗಳಿಂದ ಪಿಲಿಕುಳದಲ್ಲಿ ಕಂಬಳ ಸ್ಥಗಿತಗೊಂಡಿತ್ತು. ಆದರೆ ಈ ಬಾರಿ ಕಂಬಳ ಆಯೋಜನೆಗೆ ಜಿಲ್ಲಾಡಳಿತ ಉತ್ಸುಕತೆ ತೋರಿಸಿದೆ ಎನ್ನಲಾಗಿದೆ.



Post a Comment

0 Comments