ಕಾಪು: ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಜೃಂಭಣೆಯಿಂದ ಜರುಗುತ್ತಿರುವ 'ಉಚ್ಚಿಲ ದಸರಾ- 2022'ಕ್ಕೆ ಇಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದರು.
ನವದುರ್ಗೆ ಹಾಗೂ ಸರಸ್ವತಿ ಮೂರ್ತಿಗಳನ್ನು ವೀಕ್ಷಿಸಿದ ಸಚಿವ ಸುನಿಲ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ರವರು ಸಚಿವರಿಗೆ ಪ್ರಸಾದ ವಿತರಿಸಿದರು. ದೇವಳದ ವತಿಯಿಂದ ಮೊಗವೀರ ಮುಂದಾಳು ಜಿ ಶಂಕರ್ ಅವರು ಸಚಿವ ಸುನಿಲ್ ಕುಮಾರ್ ಅವರನ್ನು ಸನ್ಮಾನಿಸಿದರು.
0 Comments