Header Ads Widget

ಬಿಜೆಪಿ ಉಡುಪಿ ಗ್ರಾಮಾಂತರ : ಬ್ರಹ್ಮಾವರದಲ್ಲಿ ಬೃಹತ್ ಖಾದಿ ಮೇಳ ಉದ್ಘಾಟನೆ ..!!



ಬ್ರಹ್ಮಾವರ
: 'ಸೇವಾ ಪಾಕ್ಷಿಕ ಅಭಿಯಾನ' ಹಾಗೂ ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚಣೆ ಅಂಗವಾಗಿ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಬ್ರಹ್ಮಾವರದ ಗಾಂಧಿ ಮೈದಾನದ ಬಳಿ ಆಯೋಜಿಸಿದ 'ಬೃಹತ್ ಖಾದಿ ಮೇಳ'ವನ್ನು (ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ) ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ವಿ. ನಾಯ್ಕ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಮಂಡಲ ಉಪಾಧ್ಯಕ್ಷ ರಘುಪತಿ ಬ್ರಹ್ಮಾವರ, ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ವಾರಂಬಳ್ಳಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೇವಾನಂದ, ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶೋಭಾ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷೆ ಲಕ್ಷ್ಮೀ, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ, ಉಪಾಧ್ಯಕ್ಷ ಗುರುರಾಜ್ ಭಟ್, ಕಾರ್ಯಕ್ರಮದ ಮಂಡಲ ಸಂಚಾಲಕ ಮೋಹನ್ ಶೆಟ್ಟಿ, ಪ್ರಮುಖರಾದ ಪದ್ಮಾವತಿ ನಾಯರಿ, ರವಿ ಕೊಳಂಬೆ ಮುಂತಾದವರು ಉಪಸ್ಥಿತರಿದ್ದರು.


Post a Comment

0 Comments