Header Ads Widget

ಪೂಜೆಗೆ ತೆರಳಿ ವಾಪಾಸ್ ಆಗುವ ವೇಳೆ ಕುಸಿದು ಬಿದ್ದು ಮೃತಪಟ್ಟ ಮಹಿಳೆ..!!


ಕಟಪಾಡಿ:
ಮಣಿಪುರ ದೆಂದೂರುಕಟ್ಟೆಯಲ್ಲಿ ಮಹಿಳೆಯೊಬ್ಬರು ಪೂಜೆಗೆ ತೆರಳಿ ವಾಪಾಸ್ ಆಗುವ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಮಣಿಪುರದ ದೆಂದೂರುಕಟ್ಟೆ ಇಂದ್ರಾಳಿ ತೋಟದ ಗೌರಿ ಪೂಜಾರ್ತಿ ಎಂದು ಗುರುತಿಸಲಾಗಿದೆ. ಕುಸಿದು ಬಿದ್ದು ಗೌರಿಯವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ವೈದ್ಯರು ಪರಿಶೀಲಿಸುವಾಗ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಗೌರಿಯವರು ಮಣಿಪಾಲದ ಆಸ್ಪತ್ರೆಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಇವರು ಕಳೆದ ಕೆಲವು ವರ್ಷಗಳಿಂದ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದರು. ಸೊಮವಾರ ಸಂಬಂಧಿಕರ ಮನೆಯಲ್ಲಿ ಪೂಜಾ ಕಾರ್ಯಕ್ರಮಕ್ಕೆ ಹೋಗಿ ಮನೆಗೆ ಬರುವಾಗ ಸುಮಾರು 3.45 ಗಂಟೆಗೆ ಕುಸಿದು ಬಿದ್ದಿದ್ದಾರೆ.

 

Post a Comment

0 Comments