ಸಕಲೇಶಪುರ: ತಾಲೂಕಿನ ಯಸಳೂರು ಹೋಬಳಿ ದೊಡ್ಡ ಕಲ್ಲೂರು ಗ್ರಾಮದ ಅಂಗನವಾಡಿ ಬಳಿ ಬುಧವಾರ ಹಾವು ಕಚ್ಚಿ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಮಗು ರೋಶನ್ ಎಂದು ತಿಳಿದು ಬಂದಿದೆ.ಈ ದುರ್ಘಟನೆ ಬೆಳಿಗ್ಗೆ ಅಂಗನವಾಡಿಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಇದ್ದ ಹಾವನ್ನು ಹಿಡಿಯಲು ಹೋದ ವೇಳೆ ನಡೆದಿದೆ ಎನ್ನಲಾಗಿದೆ.
ಹಾವು ಕಚ್ಚಿದ ತಕ್ಷಣ ಸ್ಥಳೀಯರು ಬಾಲಕನಿಗೆ ಹೆತ್ತೂರು ಗ್ರಾಮದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ತಂದು ಅಲ್ಲಿಯ ವೈದ್ಯರ ಶಿಫಾರಸಿನ ಮೇರೆಗೆ ಹಾಸನದ ಆಸ್ಪತ್ರೆಗೆ ತರುವಾಗ ಮಾರ್ಗ ಮಧ್ಯದಲ್ಲಿ ಬಾಲಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಹಾಸನದ ಸರ್ಕಾರಿ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ, ರಾತ್ರಿ ಕುಟುಂಬಕ್ಕೆ ಬಾಲಕನ ಶವ ಹಸ್ತಾಂತರಿಸಿದರು.
0 Comments