Header Ads Widget

Whats-App-Image-2024-05-08-at-4-44-56-PM-4

ಚಿಂದಿ ಆರಿಸಲು ಬಂದಿದ್ದವರ ಮೇಲೆ ಕಾಡಾನೆ ದಾಳಿ - ಸಣ್ಣಪುಟ್ಟ ಗಾಯಗಳಿಂದ ಪಾರು..!!


ಮೂಡುಗೆರೆ:
  ಹಾಸನ ಜಿಲ್ಲೆಯ ಹಗರೇ ಮೂಲದ ನಾಗವಲ್ಲಿ ಹಾಗೂ ಗಂಡುಗುಸೆ ಎಂಬುವರು ಚಿಂದಿ ಆರಿಸಲು ಬಂದಿದ್ದು ಮೂಡಿಗೆರೆ ತಾಲೂಕಿನ ಬಣಕಲ್ ಪಶು ಆಸ್ಪತ್ರೆ ಸಮೀಪ ಟೆಂಟ್ ಹಾಕಿಕೊಂಡು ಮಲಗಿದ್ದರು ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. 

ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ನಾಗವಲ್ಲಿ ಎಂಬವರಿಗೆ ಸೊಂಟ ಹಾಗು ಎದೆ ಭಾಗಕ್ಕೆ ಪೆಟ್ಟಾಗಿದ್ದು ಗಂಡುಗುಸೆ ಎಂಬುವರಿಗೆ ಕಾಲಿಗೆ ಪೆಟ್ಟಾಗಿದೆ.

ಬಣಕಲ್ ನ ಸಾರ್ವಜನಿಕರು ಹಾಗೂ ಸಮಾಜಸೇವಕ ಆರಿಫ್ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆಗೆ ದಾಖಲಿಸಿದ್ದಾರೆ ಸ್ಥಳಕ್ಕೆ ಅರಣ್ಯ ರಕ್ಷಕ ಮೊಸಿನ್ ಉಪವಲಯ ಅಧಿಕಾರಿ ಉಮೇಶ್ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

Post a Comment

0 Comments