ಯಲ್ಲಾಪುರ: ಗುಳ್ಳಾಪುರದಲ್ಲಿ ಗಂಗಾವಳಿ ನದಿಗೆ ಕೈ ತೊಳೆಯಲು ಹೋಗಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯಿಂದ ಮಂಗಳವಾರ 66 ವಿದ್ಯಾರ್ಥಿಗಳು ಪಿಕ್ನಿಕ್ಗೆ ತೆರಳಿದ್ದ ಸಂದರ್ಭದಲ್ಲಿ ಗಂಗಾವಳಿ ನದಿಗೆ ಕೈ ತೊಳೆಯಲು ಇಳಿದ ವಿದ್ಯಾರ್ಥಿ ಪ್ರಕಾಶ್ ನಾಪತ್ತೆಯಾಗಿದ್ದ.
ಸ್ಥಳೀಯ ಮೀನುಗಾರರು ನದಿಯಲ್ಲಿ ತೀವ್ರ ಹುಡುಕಾಟ ನಡೆಸಿದ ನಂತರ ಸಂಜೆ 5 ಗಂಟೆ ಮೃತದೇಹ ಪತ್ತೆಯಾಗಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 Comments