ರಾಯಚೂರು: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕಸಬಾ ಲಿಂಗಸಗೂರು ಗ್ರಾಮದಲ್ಲಿ ಆಕಳು ಕರುವಿನ ಮೇಲೆ ಯುವಕ ಅತ್ಯಾಚಾರ ಎಸಗಿರುವ ವಿಕೃತ ಘಟನೆ ನಡೆದಿದೆ.
ಲಿಂಗಸುಗೂರು ಠಾಣೆ ಪೊಲೀಸರು ಇಮ್ತಿಯಾಜ್ ನನ್ನು ಘಟನೆ ಸಂಬಂಧ ಬಂಧಿಸಿದ್ದಾರೆ.
ಆರೋಪಿ ಇಮ್ತಿಯಾಜ್ ವೃತ್ತಿಯಲ್ಲಿ ಅಟೋ ಡ್ರೈವರ್ ಆಗಿದ್ದ , ಯಾವಾಗಲು ತೋಟದ ಮನೆಯಲ್ಲೇ ಮಲಗುತ್ತಿದ್ದ. ನಿನ್ನೆ ಯಾರೂ ಇಲ್ಲದ ವೇಳೆ ಅಮರೇಶ ಎಂಬ ವ್ಯಕ್ತಿಗೆ ಸೇರಿದ್ದ ಆಕಳ ಕರುವಿನ ಕಾಲು ಕಟ್ಟಿ ಹಾಕಿ ಅತ್ಯಾಚಾರ ಎಸಗಿದ್ದಾನೆ. ಸುಮಾರು 7-8 ಆಕಳು ಸಾಕಾಣಿಕೆ ಮಾಡುತ್ತಿದ್ದ ಅಮರೇಶ ಕೊಟ್ಟಿಗೆಯಲ್ಲಿ ಆಕಳು ಕಟ್ಟಿ ಮನೆಗೆ ಹೋದಾಗ ಘಟನೆ ನಡೆದಿದೆ.
ಇಮ್ತಿಯಾಜ್ ನ ಪೈಶಾಚಿಕ ಕೃತ್ಯ ಕಣ್ಣಾರೆ ಕಂಡಿದ್ದ ಅಮರೇಶ ಬಳಿಕ ಇಮ್ತಿಯಾಜ್ ನ ಪೊಲೀಸ್ ಠಾಣೆಗೆ ಒಪ್ಪಿಸಿ ದೂರು ನೀಡಿದ್ದಾರೆ. ಸೆಕ್ಷನ್ 377 ಅಡಿಯಲ್ಲಿ ಇಮ್ತಿಯಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
0 Comments