Header Ads Widget

ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಎಲ್ಲಾ ಘಟಕ ವಿಸರ್ಜನೆ..!!


ಬೆಂಗಳೂರು
ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜುಗೊಳ್ಳಲು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದ್ದು, ಸದ್ಯದಲ್ಲೇ ಕ್ರಿಯಾಶೀಲ ತಂಡವನ್ನು ರಚಿಸಲಾಗುತ್ತದೆ ಎಂದು ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ದೆಹಲಿ ಶಾಸಕ ದಿಲೀಪ್‌ ಪಾಂಡೆ ತಿಳಿಸಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ದೆಹಲಿ ಶಾಸಕ ದಿಲೀಪ್‌ ಪಾಂಡೆ, ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಸದ್ಯದಲ್ಲೇ ಕ್ರಿಯಾಶೀಲ ತಂಡವನ್ನು ರಚಿಸಲಾಗುತ್ತದೆ ಎಂದು ತಿಳಿಸಿದರು.ಇಲ್ಲಿಯವರೆಗೆ ಅಸ್ತಿತ್ವದಲ್ಲಿದ್ದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ತಂಡವನ್ನು ವಿಸರ್ಜನೆ ಮಾಡಲಾಗಿದೆ. 

ಗ್ರಾಮ ಸಂಪರ್ಕ ಅಭಿಯಾನ ಎಂಬ ರಾಜ್ಯಾವ್ಯಾಪಿ ಅಭಿಯಾನದ ಮೂಲಕ ಆಮ್‌ ಆದ್ಮಿ ಪಾರ್ಟಿಯು ಕಳೆದ ಐದು ತಿಂಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಿಕೊಂಡಿದೆ. ಈ ಅಭಿಯಾನದಲ್ಲಿ ಕರ್ನಾಟಕದ ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರ ಜೊತೆ ಆಮ್‌ ಆದ್ಮಿ ಪಾರ್ಟಿ ಸಂಪರ್ಕ ಸಾಧಿಸಿದೆ. ಈಗ ಬದಲಾವಣೆ ತರುವಂತಹ ಹೊಸ ತಂಡವನ್ನು ರೂಪಿಸಲಾಗುತ್ತಿದೆ.

ಬದಲಾವಣೆ ತರಬಲ್ಲ ಈ ಸಾಮಾನ್ಯ ಪುರುಷರು ಹಾಗೂ ಮಹಿಳೆಯರೊಂದಿಗೆ ಕೈಜೋಡಿಸುವುದರಿಂದ ಪಕ್ಷವು ಚುನಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸಲಿದೆ ಎಂದು ದೃಢವಾಗಿ ನಂಬಿದ್ದೇವೆ. ಬಿಜೆಪಿಯ ಭ್ರಷ್ಟ ಹಾಗೂ ಅಸಮರ್ಥ ಸರ್ಕಾರವನ್ನು ನಾವು ಮಣಿಸಲಿದ್ದೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Post a Comment

0 Comments