ಬೆಂಗಳೂರು :ಯುವ ದೇಹದಾರ್ಢ್ಯ ಪಟು ಬೆಂಗಳೂರಿನ ಕೆ.ಆರ್.ಪುರಂ ಸಮೀಪ ಹೀರಂಡಹಳ್ಳಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕೋಲಾರದ ಶ್ರೀನಿವಾಸ ಪುರ ಮೂಲದ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ದೇಹದಾರ್ಢ್ಯಪಟುರಾಗಿದ್ದಾರೆ.
ಶ್ರೀನಾಥ್ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಓದುತ್ತಿದ್ದನು. ಅದರೊಂದಿಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದ. ಆದರೆ ನಿನ್ನೆ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅತನ ಶವ ಪತ್ತೆಯಾಗಿದೆ. ಇನ್ನೂ ಆತನ ಪೋಷಕರಿಂದ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಪ್ರಕರಣ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
0 Comments