Header Ads Widget

Whats-App-Image-2024-05-08-at-4-44-56-PM-4

ತೆಲಂಗಾಣ ಬಿಜೆಪಿ ಮುಖ್ಯಸ್ಥನ ಪುತ್ರನಿಂದ ಕಾಲೇಜು ವಿದ್ಯಾರ್ಥಿ ಮೇಲೆ ಹಲ್ಲೆ : ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್..!!


ಹೈದರಾಬಾದ್:
  ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಾಗೀರಥ್ ಸಾಯಿ ವಿರುದ್ಧ  ಹೈದರಾಬಾದ್‌ನ ಖಾಸಗಿ ಕಾಲೇಜಿನಲ್ಲಿ ಸಹ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹೀಂದ್ರಾ ವಿಶ್ವವಿದ್ಯಾನಿಲಯವು ನೀಡಿದ ದೂರಿನ ಆಧಾರದ ಮೇಲೆ ಬಂಡಿ ಭಾಗೀರಥ್ ಸಾಯಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹಲ್ಲೆ ನಡೆಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಇನ್ನು ವಿಡಿಯೋದಲ್ಲಿ ಭಾಗೀರಥ್ ಕಾಲೇಜು ಆವರಣದಲ್ಲಿ ಶ್ರೀರಾಮ್‌ ಎಂಬ ವಿದ್ಯಾರ್ಥಿಗೆ ಭಾಗೀರಥ್ ಪದೇ ಪದೇ ಕಪಾಳ ಹೊಡೆಯುತ್ತಿದ್ದು, ಈ ವೇಳೆ ಭಗೀರಥನ ಸ್ನೇಹಿತನಾಗಿರುವ ಇನ್ನೊಬ್ಬ ವ್ಯಕ್ತಿಯೂ ಸಹ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸುವುದನ್ನು ನೋಡಬಹುದು.

ಶ್ರೀರಾಮ್ ತನ್ನ ಸಹಪಾಠಿಯ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಭಗೀರಥ ಸಾಯಿ ಹೇಳಿಕೊಂಡಿದ್ದು, ಬಂಡಿ ಸಂಜಯ್ ಕುಮಾರ್ ವಿಡಿಯೋವೊಂದನ್ನುನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶ್ರೀರಾಮ್ ಅವರು ಹುಡುಗಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ತಪ್ಪೊಪ್ಪಿಕೊಂಡಿರುವುದು ಕಂಡುಬಂದಿದ್ದು, ಅದಕ್ಕಾಗಿ ಭಗೀರಥ ಮತ್ತು ಇತರ ಕೆಲವು ವಿದ್ಯಾರ್ಥಿಗಳು ಥಳಿಸಿದ್ದಾರೆ.

Post a Comment

0 Comments