ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಾರ ಗ್ರಾಮ ಪಂಚಾಯತ್ನಲ್ಲಿ ಗ್ರಾಮಸ್ಥರು (ಕೋರಂ) ಇಲ್ಲದೆ ಗ್ರಾಮ ಸಭೆ ಮುಂದೂಡಿಕೆಯಾಗಿದೆ.
2023-24 ನೇ ಸಾಲಿನ ಪ್ರಥಮ ಗ್ರಾಮ ಸಭೆ ಇದಾಗಿದ್ದು, ಗ್ರಾಮಸ್ಥರ ಹಾಜರಿ ಕಡಿಮೆ ಇದ್ದ ಕಾರಣ ಸಭೆ ಮುಂದೂಡಿಕೆಯಾಗಿದೆ. ಪಂಚಾಯತ್ ಅಧ್ಯಕ್ಷ ದಿನೇಶ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆಯಲ್ಲಿ ಬೆರೆಳೆಣಿಕೆಯಷ್ಟು ಜನರಿದ್ದರು. ಕೋರಂ ಇಲ್ಲದೆ ಕೇವಲ ಕಾಟಾಚಾರಕ್ಕೆ ಸಭೆ ನಡೆಸುವಂತಿಲ್ಲ ಎಂದು ಗ್ರಾಮಸ್ಥರು ಆಗ್ರಹಿಸಿದರು. ಜನರಿಗೆ ನಿಜವಾಗಿ ಮಾಹಿತಿ ಕೊಡುವ ಉದ್ದೇಶದಿಂದ ಗ್ರಾಮ ಸಭೆ ಮಾಡುತ್ತಿದ್ದೀರಿ ಎಂದಾದರೆ ಸಭೆಯನ್ನು ಮುಂದೂಡಿ ಎಂದು ಆಗ್ರಹಿಸಿದರು.
ಇನ್ನು ಕೆಲವರು ನಾವು ಕೆಲಸ ಬಿಟ್ಟು ಬಂದಿದ್ದೇವೆ, ಹೀಗೆ ಸಭೆ ಮುಂದೂಡುವುದಾದರೆ ನಮ್ಮ ದಿನ ಕೂಲಿಯನ್ನು ನೀಡಿ ಎಂದು ಆಕ್ರೋಶ ಹೊರ ಹಾಕಿದರು. ಅಂತಿಮವಾಗಿ ಗ್ರಾಮ ಸಭೆಯನ್ನು ಮುಂದೂಡಿಕೆ ಮಾಡಿ ರಾಷ್ಟ್ರಗೀತೆ ಹಾಡುವುದರೊಂದಿಗೆ ಕಾರ್ಯಕ್ರಮ ಕೊನೆಯಾಯಿತು.
0 Comments