ಕಾರ್ಕಳ, ಡಿ 15: ಪ್ರೈಮ್ ಟಿವಿ ನ್ಯೂಸ್ : ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಭುವನೇಂದ್ರ ಕಾಲೇಜ್ ಬಳಿ ಇರುವ ದಾನೀಯ ಪಿರೇರಾ ಪಟ್ಲ ಹೌಸ್ ಎಂಬ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ವೃತ್ತ ನಿರೀಕ್ಷಕರಾದ ಟಿ. ಡಿ ನಾಗರಾಜ್ ರವರ ನೇತ್ರತ್ವದಲ್ಲಿ ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಹಾಗೂ ಸುಬ್ರಹ್ಮಣ್ಯ ಹಾಗೂ ನಗರ ಠಾಣಾ ಸಿಬ್ಬಂದಿಗಳೊಂದಿಗೆ ಗುರುವಾರ ಸಂಜೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿಯಂತೆ ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆಯುತ್ತಿದ ಎಣ್ಣೆಹೊಳೆ ನಿವಾಸಿ ಉಪೇಂದ್ರ ನಾಯಕ್ (ಯಾನೆ ಅವಿನಾಶ), ಕುಕ್ಕುಂದೂರು ಗ್ರಾಮದ ನಕ್ರೆ ನಿವಾಸಿ ಪ್ರವೀಣ ಕುಮಾರ್, ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಈ ದಂಧೆಯಲ್ಲಿ ಭಾಗಿಯಾಗಿರುವ ಗೋವರ್ಧನ ಕಾರ್ಕಳ, ದೀಪಾ ಉಡುಪಿ, ಅಶೋಕ್ ಕಾರ್ಕಳ, ಎಂಬವರನ್ನು ನಗರ ಪೊಲೀಸರು ವಶಕ್ಕೆ ಪಡೆದು ಒರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿರುತ್ತಾರೆ.
0 Comments