Header Ads Widget

Whats-App-Image-2024-05-08-at-4-44-56-PM-4

ಚಿಕ್ಕಮಗಳೂರಿನ ಯುವ ವಕೀಲನ ಮೇಲಿನ ಅಮಾನುಷ ಹಲ್ಲೆ ಖಂಡಿಸಿ ಉಡುಪಿ ವಕೀಲರ ಸಂಘದಿಂದ ಪ್ರತಿಭಟನೆ..!!


ಉಡುಪಿ: ಡಿ.5: ಪ್ರೈಮ್ ಟಿವಿ ನ್ಯೂಸ್ : ಚಿಕ್ಕಮಗಳೂರಿನ ಯುವ ವಕೀಲ ಪ್ರೀತಮ್ ಅವರ ಮೇಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮತ್ತು ಇತರ ಪೊಲೀಸರು ನಡೆಸಿದ ಅಮಾನುಷ ಹಲ್ಲೆಯನ್ನು ಖಂಡಿಸಿ, ಉಡುಪಿ ವಕೀಲರ ಸಂಘದಿOದ ಇಂದು ಪ್ರತಿಭಟನೆ ನಡೆಯಿತು.

ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ನ್ಯಾಯವಾದಿಗಳು, ತಪ್ಪಿತಸ್ಥ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ರೆನಾಲ್ಡ್ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಕೆಲಹೊತ್ತು ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಅರ್ಧ ತಾಸು ಪ್ರತಿಭಟನೆ ನಡೆಸಿದರು. ಬಳಿಕ ವಕೀಲರ ಸಂಘದ ಅಧ್ಯಕ್ಷರು ಮಾತಾನಾಡಿ, ಪೊಲೀಸರು ಯುವ ನ್ಯಾಯವಾದಿಯ ಮೇಲೆ ಅಮಾನುಷ ಹಲ್ಲೆ ನಡೆಸಿದ್ದಲ್ಲದೆ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಈ ರೀತಿ ಪೊಲೀಸರು ಪ್ರತಿಭಟನೆ ನಡೆಸಿದ ಇತಿಹಾಸವೇ ಇಲ್ಲ. ಪ್ರತಿಭಟನೆಯಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ವಕೀಲರ ರಕ್ಷಣಾ ಕಾಯ್ದೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕು ಎಂದು  ಆಗ್ರಹಿಸಿದ್ದಾರೆ.



Post a Comment

0 Comments