Header Ads Widget

ಕಾರ್ಕಳ : ಕುಂಟಲ್ಪಾಡಿಯಲ್ಲಿ ವ್ಯಕ್ತಿ ನೇಣಿಗೆ ಶರಣು..!!


ಕಾರ್ಕಳ : ಫೆ.18: ಪ್ರೈಮ್ ಟಿವಿ ನ್ಯೂಸ್ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16 ರಂದು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಕುಂಟಲ್ಪಾಡಿಯಲ್ಲಿ ನಡೆದಿದೆ 

ಸುಹೇಲ್‌ (33)ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಹೇಲ್‌ ಶುಕ್ರವಾರ ರಾತ್ರಿ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಇವರಿಗೆ ಕುಡಿತದ ಚಟವಿದ್ದು, ಇದರಿಂದಲೇ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Post a Comment

0 Comments