ಕೊಲ್ಲಂ: ನಗರದಲ್ಲಿ ಜಾತ್ರೆಯ ರಥದ ಚಕ್ರದಡಿ ಬಿದ್ದು ಐದು ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಕೊಲ್ಲಂನಲ್ಲಿ ಸಂಭವಿಸಿದೆ.
ಚವರ ಮೂಲದ ರಮೇಶನ್ – ಜೀಜಿ ದಂಪತಿಯ ಕ್ಷೇತ್ರ (5) ಮೃತ ಬಾಲಕಿ. ಅಪ್ಪ – ಅಮ್ಮನ ಜೊತೆ ಕೊಟ್ಟಂಕುಳಂಗರ ದೇವಸ್ಥಾನದ ಜಾತ್ರೆಗೆ ಕ್ಷೇತ್ರ ಬಂದಿದ್ದಳು. ರಥ ಎಳೆಯುವ ಸಂದರ್ಭದಲ್ಲಿ ಜನರ ನೂಕುನುಗ್ಗಲು ಉಂಟಾಗಿದೆ.
ಈ ವೇಳೆ ಅಪ್ಪನ ಕೈಯಿಂದ ಆಕಸ್ಮಿಕವಾಗಿ ಕ್ಷೇತ್ರ ಕೆಳಗೆ ಬಿದ್ದಿದ್ದಾಳೆ. ರಥದ ಚಕ್ರ ಮಗುವಿನ ಮೇಲೆ ಹರಿದಿದೆ. ಪರಿಣಾಮ ಮಗುವಿನ ಪ್ರಾಣ ಹೋಗಿದೆ ಎನ್ನಲಾಗಿದೆ.
ಕ್ಷೇತ್ರಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಆದರೆ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವೊಮ್ಮೆ ಮಕ್ಕಳು ರಥಕ್ಕೆ ಕಟ್ಟಿದ ಹಗ್ಗವನ್ನು ಎಳೆಯುತ್ತಾರೆ. ಮಗು ಆಕಸ್ಮಿಕವಾಗಿ ಬಿದ್ದಿದ್ದಾಳೆಂದು ತೋರುತ್ತದೆ” ಎಂದು ಪೊಲೀಸರು ತಿಳಿಸಿದ್ದಾರೆ.
0 Comments