Header Ads Widget

Whats-App-Image-2024-05-08-at-4-44-56-PM-4

ಸಂಕರ್ಷಣ ಶಾಲಗ್ರಾಮ ಹಸ್ತಾಂತರಿಸಿ ಪೇಜಾವರ ಶ್ರೀ : ರಾಮ - (ಲಕ್ಷ್ಮಣ) ಬಲರಾಮರ ಸನ್ನಿಧಿಗಳ ಪುನರುತ್ಥಾನ ಕಾಲನಿರ್ಣಯದಂತಿದೆ...!!

ಮ‌ಲ್ಪೆ: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ದೇಗುಲ ನಿರ್ಮಾಣ ಮತ್ತು ಪ್ರಾಣಪ್ರತಿಷ್ಠಾಪನೆ ಮತ್ತು ಅದರ ಬಳಿಕ  ಉಡುಪಿ ವಡಭಾಂಡೇಶ್ವರದಲ್ಲಿ ಪ್ರಾಚೀನವಾದ ಪೂರ್ವಾವತಾರದಲ್ಲಿ ಲಕ್ಷ್ಮಣನೇ ಆಗಿದ್ದ ಬಲರಾಮರ ಸನ್ನಿಧಿಯ ಪುನರುತ್ಥಾನ ಪುನಃ ಪ್ರತಿಷ್ಠೆಯೂ ಸಂಪನ್ನಗೊಳ್ಳುತ್ತಿರುವುದು ಅತ್ಯಂತ ಅಚ್ಚರಿಯ ಸಂಗತಿಯಾಗಿದ್ದು ಕಾಲವೇ ಈ ಎರಡನ್ನೂ ನಿರ್ಣಯಿಸಿದಂತಿದೆ ಎಂದು ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅಭಿಪ್ರಾಯಿಸಿದ್ದಾರೆ .

ಅಯೋಧ್ಯೆಯ ರಾಮನ ಪಾದಮೂಲದಲ್ಲಿಟ್ಟು ಅರ್ಚಿಸಿ ಪೂಜಿಸಿ ತಾವು ತೆಗೆದುಕೊಂಡು ಬಂದ ಭಗವಂತನ ಸಂಕರ್ಷಣ ಶಾಲಗ್ರಾಮವನ್ನು ನವೀಕರಣಗೊಂಡ ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ದಿನಾಂಕ 21 ರ ಗುರುವಾರದಂದು ಹಸ್ತಾಂತರಿಸಿ   ಸಂತಸವನ್ನು ವ್ಯಕ್ತಪಡಿಸಿದರು.

ಇದೊಂದು ಅಪೂರ್ವ ಯೋಗವಾಗಿದ್ದು ಬಲರಾಮನು ತ್ರೇತಾಯುಗದಲ್ಲಿ ಲಕ್ಷ್ಮಣನಾಗಿ ಅವತರಿಸಿದ್ದ. ಭಗವಂತನ ಸಂಕರ್ಷಣರೂಪವೇ ಆಗಿರುವುದರಿಂದ ಬಲರಾಮನಲ್ಲಿಗೆ ಅಯೋಧ್ಯೆಯಿಂದ ಸಂಕರ್ಷಣ ಶಾಲಗ್ರಾಮವನ್ನು ಪೂಜಿಸಿ ತರಲಾಗಿದೆ .‌ ಆ ಹಿನ್ನೆಲೆಯಲ್ಲಿ ರಾಮ‌ ಬಲರಾಮರ ಸನ್ನಿಧಿಗಳ ಪುನರುತ್ಥಾನ ಕಾರ್ಯ ಏಕಕಾಲದಲ್ಲಿ ನಡೆಯುತ್ತಿರುವುದರಿಂದ ದೇಶಕ್ಕೆ  ಮಂಗಳವಾಗಲಿದೆ ಎಂದರು .ಈ ಸತ್ಕಾರ್ಯದಲ್ಲಿ ಕೈಜೋಡಿಸಿದ ಪ್ರತಿಯೊಬ್ಬರಿಗೂ ರಾಮ ಬಲರಾಮರ ಅನುಗ್ರಹದ ಬಲ ಸದಾ ಇರಲಿ ಎಂದರು .

ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ನಿಮಿತ್ತ ಹಮ್ಮಿಕೊಂಡ ಭಜನೋತ್ಸವಕ್ಕೆ ತಾಳ ಹಿಡಿದು ಭಜನೆ ಮಾಡಿ ಚಾಲನೆ ನೀಡಿದರು.

ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ , ಪ್ರಧಾನ ಅರ್ಚಕ ಶ್ರೀನಿವಾಸ ಭಟ್ , ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕಡೆಕಾರ್ ಶ್ರೀಶ ಭಟ್ , ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ ಸತ್ಯನಾರಾಯಣ ಆಚಾರ್ಯ , ಪೆರಂಪಳ್ಳಿ ವಾಸುದೇವ ಭಟ್ , ಮುರಳೀಕೃಷ್ಣರಾವ್ ಬಡಾನಿಡಿಯೂರು ಮತ್ತಿತರರು ಇದ್ದರು .‌

Post a Comment

0 Comments