Header Ads Widget

ಸಾಲದ ಬಾಧೆಯಿಂದ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ...!!

ಸಿದ್ದಾಪುರ:  ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಮುತ್ತಿನಕಟ್ಟೆ ಹಾಡಿಯಲ್ಲಿ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡವರು ತೀರ್ಥಹಳ್ಳಿ ತಾಲೂಕಿನ ಬೆಜ್ಜುವಳ್ಳಿ ಅಕ್ಷಯ (26) ಎಂದು ತಿಳಿದು ಬಂದಿದೆ.

ಅವರು ಸಾಲದ ಬಾಧೆಯಿಂದ ತೀರ್ಥಹಳ್ಳಿ ಗಾಂಧಿನಗರದ ಮನೆಯಿಂದ ಮಾ. 18ರಂದು ನಾಪತ್ತೆಯಾಗಿದ್ದರು ಎಂದು ತಿಳಿಯಲಾಗಿದೆ.

ಈ ಮೊದಲು ಅವರ ಪತ್ನಿ ಅಮೃತಾ ಅವರು ತೀರ್ಥಹಳ್ಳಿ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು.
ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments