Header Ads Widget

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಪರೀಕ್ಷಾ ದಿನವೇ ನೇಣು ಬಿಗಿದು ಆತ್ಮಹತ್ಯೆ...!!

ಶಿವಮೊಗ್ಗ:  ಮಾರ್ಚ್ : 26: ಪ್ರೈಮ್ ಟಿವಿ ನ್ಯೂಸ್ : ವಿದ್ಯಾರ್ಥಿಯೊಬ್ಬ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆನಂದಪುರದ KPSC ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಚೆನ್ನಾಗಿಯೇ ಓದಿ ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments