Header Ads Widget

ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ..!!


ಮಂಗಳೂರು : ಎಳನೀರು ಕುಡಿದು ಸುಮಾರು 15 ಮಂದಿ ಅಸ್ವಸ್ಥರಾದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.

ಅಡ್ಯಾರ್‍ನಲ್ಲಿರುವ ಎಳನೀರು ಮತ್ತು ಐಸ್‌ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ.

ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಘಟನೆ ಬಳಿಕ ಆಸ್ಪತ್ರೆ ಹಾಗೂ ಫ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಳನೀರಿನ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೆ ಜನ ಆತಂಕಕ್ಕೆ ಒಳಗಾಗದಂತೆ ಆರೋಗ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Post a Comment

0 Comments