Header Ads Widget

ಚಿಕ್ಕಮಗಳೂರು: ಏಕಾ ಏಕಿ ಹೊತ್ತಿ ಉರಿದ ಕರ್ಣಾಟಕ ಬ್ಯಾಂಕ್ ATM : ಲಕ್ಷಾಂತರ ರೂ. ಜೊತೆಗೆ ಎಟಿಎಂ ಯಂತ್ರ ಬೆಂಕಿಗಾಹುತಿ...!!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ನಗರದ ಐಜಿ ರಸ್ತೆಯ ಸಾರಗೋಡು ಆರ್ಕೆಡ್ನಲ್ಲಿರುವ ಕರ್ಣಾಟಕ ಬ್ಯಾಂಕ್ ಎಟಿಎಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎಟಿಎಂ ನಲ್ಲಿದ್ದ 5 ಲಕ್ಷ ಹಣ ಭಸ್ಮವಾಗಿದೆ.

ಜೊತೆಗೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಕೂಡ ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಈ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ಮಾಹಿತಿಯನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್ ಅಗ್ನಿಶಾಮಕ ದಳಕ್ಕೆ ರವಾನಿಸಿದೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅದಾಗಲೇ ನಗದು ಸಹಿತ ಎಟಿಎಂ ಕಾರ್ಡ್ ಸುಟ್ಟು ಕರಕಲಾಗಿದೆ.

ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Post a Comment

0 Comments