Header Ads Widget

Whats-App-Image-2024-05-08-at-4-44-56-PM-4

ಉಡುಪಿ ಶ್ರೀ ಕೃಷ್ಣ ಮಠಕ್ಕೆ ತೇಜಸ್ವಿ ಸೂರ್ಯ ಭೇಟಿ...!!

ಉಡುಪಿ, ಏ.28: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಗಳಾದ ಸುಶ್ರೀಂದ್ರ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಪ್ರಸಾದ್ ಬಿಲ್ಲವ, ಯುವ ಮೋರ್ಚಾ ಉಡುಪಿ ನಗರ ಅಧ್ಯಕ್ಷರಾದ ಶ್ರೀವತ್ಸ, ಯುವ ಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷರಾದ ಕಿರಣ್ ಪೂಜಾರಿ ಹಾಗೂ ಯುವ ಮೋರ್ಚಾದ ಕಾರ್ಯಕರ್ತರು ಉಪಸ್ಥಿತರಿದ್ದರು.

Post a Comment

0 Comments