ಕಾರ್ಕಳ : ಎಪ್ರಿಲ್ : 04: ಪ್ರೈಮ್ ಟಿವಿ ನ್ಯೂಸ್ : ಎರ್ಲಪಾಡಿ ಗ್ರಾಮದ ಬಿಜೆಪಿಯ ಯುವ ಕಾರ್ಯಕರ್ತರಾದ ಕಿರಣ್ ಪೂಜಾರಿ ಮತ್ತು ನಾಗೇಂದ್ರ ಆಚಾರ್ಯ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆ ಗೊಂಡರು.
ಇವರನ್ನು ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ಹಾಗೂ ಪಕ್ಷದ ಅಧ್ಯಕ್ಷರಾದ ಕೆ. ಸದಾಶಿವ ದೇವಾಡಿಗ ರವರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮಾತನಾಡಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡು ಲೋಕಸಭಾಕ್ಷೇತ್ರದ ನಮ್ಮ ಅಭ್ಯರ್ಥಿಯಾದ ಶ್ರೀ ಜಯಪ್ರಕಾಶ ಹೆಗ್ಡೆಯವರ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿ, ಅಭಿನಂದಿಸಿದರು.
ಸಭೆಯಲ್ಲಿ ಎರ್ಲಪಾಡಿ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಭೋಜ ಶೆಟ್ಟಿ ಸ್ವಾಗತಿಸಿ, ಕೃಷಿ ಘಟಕದ ರಾಜ್ಯ ಕಾರ್ಯದರ್ಶಿ ಉದಯ ವಿ. ಶೆಟ್ಟಿ, ಸುಧಾಕರ ಹೆಗ್ಡೆ, ಸುಜಾತ ಪೂಜಾರಿ, ಸುಧಾಕರ ಶೆಟ್ಟಿ, ಸುಬಿತ್ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.
0 Comments