Header Ads Widget

Whats-App-Image-2024-05-08-at-4-44-56-PM-4

"ಕೆಜಿಎಫ್" ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿಗೆ 'ಮತ್ತಷ್ಟು ಮೇಲಕ್ಕೆ ಏರುತ್ತೀಯ' ಎಂದು ಅಭಯ ನೀಡಿದ ದೈವ...!!

ಕಿನ್ನಿಗೋಳಿ : "ಕೆಜಿಎಫ್" ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಅವರು ಮಂಗಳೂರಿನ ಹೊರವಲಯದ ಕಿನ್ನಿಗೋಳಿ ತಮ್ಮ ಕುಟುಂಬದ ಮನೆ ತಾಳಿಪಾಡಿ ಗುತ್ತುವಿನಲ್ಲಿ ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದು ಈ ವೇಳೆ, ಮತ್ತಷ್ಟು ಎತ್ತರಕ್ಕೆ ಏರುತ್ತೀಯ ಎಂದು ದೈವ ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿದೆ.

ಶ್ರೀನಿಧಿ ಶೆಟ್ಟಿ ಈ ಹಿಂದೆ ತನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಿದ್ದು ಅದರಂತೆ ಕಿನ್ನಿಗೋಳಿ ಸಮೀಪ ತಾಳಿಪಾಡಿ ಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಸಲಾಯಿತು.

Post a Comment

0 Comments